ಮಂಗಳವಾರ, ಜುಲೈ 19, 2011

ಕೊಡಗಿನಲ್ಲಿ ಭಾರಿ ಮಳೆ: ಮಹಿಳೆ ಬಲಿ

ವಿಕ ಸುದ್ದಿಲೋಕ ಮಡಿಕೇರಿ
ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ನದಿ ತೊರೆಗಳು ಅಪಾಯ ಮಟ್ಟದಲ್ಲಿ ತುಂಬಿ ಹರಿಯಲು ಪ್ರಾರಂಭಿಸಿವೆ. ಭಾಗಮಂಡಲದ ತ್ರಿವೇಣಿ ಸಂಗಮ ಎರಡನೇ ಬಾರಿಗೆ ಜಲಾವೃತಗೊಂಡಿದೆ. ಭಾರಿ ಮಳೆಗೆ ಶ್ರೀಮಂಗಲದಲ್ಲಿ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟರು.
ಭಾಗಮಂಡಲ-ಅಯ್ಯಂಗೇರಿ ಹಾಗೂ ಭಾಗಮಂಡಲ- ಮಡಿಕೇರಿ ರಸ್ತೆಯ ಮೇಲೆ  ನೀರು ಉಕ್ಕಿ ಹರಿಯಲು ಪ್ರಾರಂಭಿ ಸಿದೆ. ಅಯ್ಯಂಗೇರಿ ರಸ್ತೆಯಲ್ಲಿ ಎರಡು ಅಡಿ ಎತ್ತರದಲ್ಲಿ ನದಿ ನೀರು ಹರಿಯುತ್ತಿರುವುದರಿಂದ ರಸ್ತೆ ಸಂಚಾರ ಸ್ಥಗಿತ ಗೊಂಡಿದೆ. ಮಡಿಕೇರಿ ರಸ್ತೆಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಪ್ರವೇಶಿಸದ ಕಾರಣ ಸಂಚಾರ ವ್ಯವಸ್ಥೆ ಎಂದಿನಂತೆ ಇದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ